Media
![](https://alliance.edu.in/siteassets/images/kannada-rajyotsava-1.jpg)
![](https://alliance.edu.in/siteassets/images/kannada-rajyotsava-2.jpg)
![](https://alliance.edu.in/siteassets/images/kannada-rajyotsava-3.jpg)
![](https://alliance.edu.in/siteassets/images/kannada-rajyotsava-4.jpg)
ಅಲಯನ್ಸ್ ವಿಶ್ವವಿದ್ಯಾಲಯದಲ್ಲಿ ಕನ್ನಡ ಭಾಷಾ ಕೇಂದ್ರದ ವತಿಯಿಂದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ದ್ವಜಾರೋಹಣ, ಕನ್ನಡಾಂಬೆಗೆ ಪುಷ್ಪನಮನ ಮತ್ತು ನಾಡಗೀತೆ ಪ್ರಸ್ತುತಿಯೊಂದಿಗೆ ದಿನಾಂಕ: 20.11.2019 ರಂದು ಅದ್ಧೂರಿಯಿಂದ ಆಚರಿಸಲಾಯಿತು. ರಾಜ್ಯೋತ್ಸವ ಸಮಾರಂಭದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಪ್ರಬಂಧ ಮತ್ತು ರಸಪ್ರೆಶ್ನೆ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.
ಸಂಜೆ ಪ್ರಾರ್ಥನೆ ಮತ್ತು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮ ಪ್ರಾರಂಭವಾಯಿತು. ಡಾ. ರತ್ನಾಕರ್ ಆಚಾರಿಯವರು ಸ್ವಾಗತ ಕೋರಿದರು. ಕನ್ನಡ ಭಾಷಾ ಕೇಂದ್ರದ ಅಧ್ಯಕ್ಷರು ಹಾಗೂ ಉಪನ್ಯಾಸಕರಾದ ಪ್ರೊ. ಪ್ರೇಮಾನಂದ್ ಶೆಟ್ಟಿಯವರು ಮಾತನಾಡಿದರು. ವಿದ್ಯಾರ್ಥಿ ವೃಂದದಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು. ಕನ್ನಡ ಭಾಷಾ ಕೇಂದ್ರದ ಉಪಾಧ್ಯಕ್ಷರು ಹಾಗೂ ಉಪನ್ಯಾಸಕರಾದ ಪ್ರೊ. ರಮಣ ಶೆಟ್ಟಿ ವಂದನಾರ್ಪಣೆ ಮಾಡಿದರು.
ಈ ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಉಪ ಕುಲಪತಿಗಳು, ಕುಲಸಚಿವರು ಹಾಗೂ ಎಲ್ಲಾ ಉಪನ್ಯಾಸಕ ಮತ್ತು ಸಿಬ್ಬಂದಿ ವೃಂದದವರು, ವಿದ್ಯಾರ್ಥಿಗಳು, ಕನ್ನಡ ಭಾಷಾ ಕೇಂದ್ರದ ಕಾರ್ಯದರ್ಶಿಗಳು ಹಾಗೂ ಎಲ್ಲಾ ಸದಸ್ಯರು ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಡಲಾಯಿತು.